Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:2 - ಕನ್ನಡ ಸಮಕಾಲಿಕ ಅನುವಾದ

2 ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಮೊದಲನೆಯವನು ಹೊರಟು ತನ್ನ ಪಾತ್ರೆಯಲ್ಲಿದ್ದದ್ದನ್ನು ಭೂವಿುಗೆ ಹೊಯ್ದನು; ಕೂಡಲೇ ಮೊದಲನೆಯ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ನಮಸ್ಕಾರಮಾಡುವ ಮನುಷ್ಯರ ಮೈಮೇಲೆ ಕೆಟ್ಟ ಉರಿಹುಣ್ಣು ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಯ್ಲೆಚೊ ದೆವಾಚೊ ದುತ್ ಗೆಲೊ, ಅನಿ ತೆನಿ ಅಪ್ನಾಕ್ಲ್ಯಾ ಕಟೊರ್‍ಯಾತ್ಲೆ ಜಗಾವರ್ತಿ ವೊತ್ಲ್ಯಾನ್. ತನ್ನಾ ಭಯಾನಕ್ ಜನಾವರ್ ಅನಿ ತ್ಯೆಚ್ಯಾ ಮುರ್ತಿಯಾಂಚೆ ಆರಾದನ್ ಕರಲ್ಲ್ಯಾಂಚ್ಯಾ ಅಂಗಾ ವೈನಿ ವಾಯ್ಟ್ ಬುರ್ಶಿ ದುಕ್ಕಾ ಉಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:2
22 ತಿಳಿವುಗಳ ಹೋಲಿಕೆ  

ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”


ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು.


ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’ ” ಎಂದು ಬರೆದಿದ್ದನು.


ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.


ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.


ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು.


ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.


ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.


ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು.


ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು.


ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.


ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,


ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು