Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:15 - ಕನ್ನಡ ಸಮಕಾಲಿಕ ಅನುವಾದ

15 ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾ ಶಾರಾತ್ ಯಾವಾರ್ ಕರುನ್ ಸಾವ್ಕಾರ್ ಹೊಲ್ಲಿ ಲೊಕಾ ಧುರುಚ್ ಇಬೆ ರ್‍ಹಾತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತಿಚ್ಯಾ ಕಸ್ಟಾತ್ ಭಾಗ್ ಘೆವ್ಕ್ ತೆನಿ ಭಿಂಯಾಲೆ. ತೆನಿ ರಡ್ತ್ಯಾತ್ ಅನಿ ಮರಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:15
14 ತಿಳಿವುಗಳ ಹೋಲಿಕೆ  

ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.


ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.


ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.


ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ.


ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,


ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


“ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು.


ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು