Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:20 - ಕನ್ನಡ ಸಮಕಾಲಿಕ ಅನುವಾದ

20 “ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸರ್‍ಗಾ ತಿಚ್ಯಾ ನಾಸಾಸಾಟ್ನಿ ಖುಶಿ ಹೊ! ದೆವಾಚ್ಯಾ ಲೊಕಾನು, ಅಪೊಸ್ತಲಾನು ಅನಿ ಪ್ರವಾದ್ಯಾನು, ಖುಶಿ ಹೊವಾ! ಕಶ್ಯಾಕ್ ಮಟ್ಲ್ಯಾರ್ ತೆನಿ ತುಮ್ಕಾ ಕರಲ್ಲ್ಯಾ ಸಗ್ಳ್ಯಾ ಕಾಮಾಂಚ್ಯಾ ತಕ್ ದೆವಾನ್ ತಿಕಾ ಶಿಕ್ಷಾ ದಿಲ್ಯಾನಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:20
26 ತಿಳಿವುಗಳ ಹೋಲಿಕೆ  

ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.


ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.


ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. ನನಗೆ ಹಾನಿಮಾಡುವವರು ನಾಚಿಕೆಪಡಲಿ; ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ.


ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.


ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.


ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು