Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:22 - ಕನ್ನಡ ಸಮಕಾಲಿಕ ಅನುವಾದ

22 ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಾಬೆಲೇ, ನಿನ್ನಲ್ಲಿ ವೀಣೆಗಾರರೂ ವಾದ್ಯಗಾರರೂ ಕೊಳಲೂದುವವರೂ ತುತೂರಿಯವರೂ ಮಾಡುವ ಧ್ವನಿಯು ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿನ್ನಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಾರ್ಪ್ ಮನ್ತಲ್ಯಾ ವಾಜಾಪಾಚೊ ಆವಾಜ್ ಅನಿ ಮಾನ್ಸಾಂಚಿ ಧನಾ, ಬಾರಿಕ್ಲೊ ಪಂವೊ ಅನಿ ಮೊಟ್ಯಾ ಪಂವ್ಯಾಚೊ ಅವಾಜ್ ತುಜ್ಯಾ ಭುತ್ತುರ್ ಅನಿ ಕನ್ನಾಚ್ ಆಯ್ಕೊ ಯೆಯ್ನಾ! ಕಸ್ಲೆಬಿ ಹೊಂವ್ದಿತ್ ಕಾಮ್ ಕರ್ತಲೊ ಎಕ್‍ಬಿ ಕಾಮ್ಗಾರಿ ತುಜ್ಯಾ ಭುತ್ತುರ್ ಗಾವಿನಾ; ಅನಿ ದಳ್ತಲ್ಯಾ ಮೊಟ್ಯಾ ಗುಂಡ್ಯಾಚೊ ಅವಾಜ್ ಅನಿಫಿಡೆ ಆಯ್ಕೊ ಯೆಯ್ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:22
10 ತಿಳಿವುಗಳ ಹೋಲಿಕೆ  

ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.


ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು.


ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


ಬೀದಿ ಬಾಗಿಲುಗಳು ಮುಚ್ಚಿರುವುವು, ಅರೆಯುವ ಶಬ್ದವು ಕಡಿಮೆಯಾಗುವುದು; ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. ಮುಂಜಾನೆಯ ಗಾನಸ್ವರ ಮಂದವಾಗುವುದು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”


ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,


ಇಗೋ ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಆನಂದ ಧ್ವನಿಯು ಕೇಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು