Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:4 - ಕನ್ನಡ ಸಮಕಾಲಿಕ ಅನುವಾದ

4 ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸರ್‍ಗಾ ವೈನಾ ಅನಿಎಕ್ ಅವಾಜ್ ಮಿಯಾ ಆಯಿಕ್ಲೊ, ಮಾಜ್ಯಾ ಲೊಕಾನು ಭಾಯ್ರ್ ಯೆವಾ! ತಿಚೆಕ್ನಾ ಭಾಯ್ರ್ ಯೆವಾ! ತುಮಿ ತಿಚ್ಯಾ ಪಾಪ್ನಾತ್ನಿ ಭಾಗ್ ಘೆತಲೆ ನಕ್ಕೊ; ತಿಚ್ಯಾ ಶಿಕ್ಷೆತ್ ತುಮಿ ಭಾಗ್ ಘೆತಲೆ ನಕ್ಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:4
16 ತಿಳಿವುಗಳ ಹೋಲಿಕೆ  

ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.


“ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ.


ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಬಾಬಿಲೋನಿನ ಸೀಮೆಯಿಂದ ಹೊರಡಿರಿ; ಮಂದೆಯ ಮುಂದೆ ಹೋತಗಳ ಹಾಗೆ ಇರಿ.


ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.


ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.


ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.”


ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


“ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳವರೆಗೂ ಏರುತ್ತದೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು