Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:12 - ಕನ್ನಡ ಸಮಕಾಲಿಕ ಅನುವಾದ

12 ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನ ಕಣ್ಣುಗಳು ಬೆಂಕಿಯ ಉರಿಯಂತಿವೆ; ಆತನ ತಲೆಯ ಮೇಲೆ ಅನೇಕ ಮಕುಟಗಳುಂಟು; ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಚೆ ಡೊಳೆ ಆಗಿ ಸರ್ಕೆ ಹೊತ್ತೆ, ಅನಿ ತೆನಿ ಅಪ್ನಾಚ್ಯಾ ಟಕ್ಲ್ಯಾ ವರ್ತಿ ಸುಮಾರ್ ಮುಕುಟ್ ನೆಸಲ್ಲ್ಯಾನ್, ತ್ಯೆಚ್ಯಾ ವರ್ತಿ ಎಕ್ ನಾವ್ ಲಿವಲ್ಲೆ ಹೊತ್ತೆ ಖರೆ ತೆ ಕಾಯ್ ಮನುನ್ ತೆಕಾ ಎಕ್ಲ್ಯಾಕ್ ಸೊಡುನ್ ಅನಿ ಕೊನಾಕ್‍ಬಿ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:12
25 ತಿಳಿವುಗಳ ಹೋಲಿಕೆ  

ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ಅವರ ತಲೆ ಕೂದಲುಗಳು ಬಿಳಿಯ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿದ್ದವು. ಅವರ ನೇತ್ರಗಳು ಬೆಂಕಿಯ ಜ್ವಾಲೆಯಂತೆಯೂ


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.


ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.


ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.


ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.


ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


“ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”


ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.


ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!


ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು