Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:15 - ಕನ್ನಡ ಸಮಕಾಲಿಕ ಅನುವಾದ

15 ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯೆಚ್ಯಾ ತೊಂಡಾತ್ನಾ ಎಕ್ ಧಾರ್‍ಲೊ ಮೊಟೊ ಚಾಕು ಭಾಯ್ರ್ ಯೆಲೊ, ತ್ಯಾ ಚಾಕ್ವಾನಿ ತೊ ದೆಶಾಕ್ನಿ ಹಾರ್‍ವುನ್ ಟಾಕ್ತಾ. ತೊ ತೆಂಚ್ಯಾ ವರ್ತಿ ಲೊಂಗ್ಟಾಚ್ಯಾ ದಾಂಡ್ಯಾನಿ ರಾಜ್ ಚಾಲ್ವುತಾ, ಅನಿ ತೊ ಸಗ್ಳ್ಯಾನಿಕಿ ಮೊಟ್ಯಾ ದೆವಾಚ್ಯಾ ರಾಗಾಚ್ಯಾ ದ್ರಾಕ್ಷಿ ಮಳ್ತಲ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ ಘಾಲುನ್ ತೊ ಚಿರ್ಡುನ್ ಸೊಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:15
15 ತಿಳಿವುಗಳ ಹೋಲಿಕೆ  

ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’


ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.


ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.


ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


“ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.


ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು