Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:9 - ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ದೆವಾಚ್ಯಾ ದುತಾನ್ ಮಾಕಾ, “ಹೆ ಲಿವ್; ಜೆ ಕೊನಾಕ್ ಬೊಕ್ಡಾಚ್ಯಾ ಲಗ್ನಾಚ್ಯಾ ಸನಾಕ್ ಬಲ್ವನ್ ಗಾವ್ಲಾ, ತೆನಿ ಕವ್ಡೆ ಸುಖಿ. ದೆವಾಚ್ಯಾ ದುತಾನ್ ಹೆಬಿ ಮಿಳ್ವುಲ್ಯಾನ್ ಅನಿ, ಹ್ಯಾ ದೆವಾಚ್ಯಾ ಗೊಸ್ಟಿಯಾ ಖರ್‍ಯಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:9
27 ತಿಳಿವುಗಳ ಹೋಲಿಕೆ  

ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.


“ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:


“ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:


ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.


ಈ ಮಾತು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು