Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:2 - ಕನ್ನಡ ಸಮಕಾಲಿಕ ಅನುವಾದ

2 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಿಯಾ ಕಾಯ್-ಕಾಯ್ ಕರ್‍ಲೆ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ಕವ್ಡೆ ಸೊಸುನ್ ಘೆವ್ನ್ ಕವ್ಡ್ಯಾ ತರಾಸಾನ್ ಕಾಮ್ ಕರ್‍ಲೆ ಮನುನ್ ಮಾಕಾ ಗೊತ್ತ್ ಹಾಯ್, ಬುರ್ಶಿ ಲೊಕಾ ಮಟ್ಲ್ಯಾರ್ ತುಕಾ ಸೊಸುನ್ ಘೆವ್ಕ್ ಹೊಯ್ನಾ, ಅನಿ ಅಪ್ನಿ ಅಪೊಸ್ತಲಾ ಮನುನ್ ಸಾಂಗ್ತಲ್ಯಾಂಚಿ ತಿಯಾ ಪರಿಕ್ಷಾ ಕರುನ್ ಬಗಟ್ಲೆ, ಅನಿ ತೆನಿ ಅಪೊಸ್ತಲಾ ನ್ಹಯ್ ಝುಟಿ ಲೊಕಾ ಮನುನ್ ದಾಕ್ವುನ್ ದಿಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:2
21 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನೀನು ತಣ್ಣಗೂ ಇಲ್ಲ, ಬಿಸಿಯೂ ಇಲ್ಲ, ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು