Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:22 - ಕನ್ನಡ ಸಮಕಾಲಿಕ ಅನುವಾದ

22 ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಗೋ ನೋಡು, ಅವಳು ರೋಗದಿಂದ ಹಾಸಿಗೆ ಹಿಡಿಯುವಂತೆ ಮಾಡುತ್ತೇನೆ. ಅವಳೊಡನೆ ವ್ಯಭಿಚಾರ ಮಾಡುವವರು ಅವಳ ದುಷ್ಕೃತ್ಯಗಳನ್ನು ತ್ಯಜಿಸಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗದೆಹೋದರೆ, ಅವರು ಭೀಕರ ಕಷ್ಟನಷ್ಟಗಳಿಗೆ ಗುರಿಯಾಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ಅವಳು ಹಾಸಿಗೆಯ ಮೇಲೆ ಬಿದ್ದುಕೊಂಡಿರುವಂತೆ ಮಾಡುವೆನು, ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಮನಸ್ಸನ್ನು ದೇವರ ಕಡಗೆ ತಿರುಗಿಸಿಕೊಂಡು ಅವಳ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಮಿಯಾ ತಿಕಾ ಸಿಕ್ ಹೊವ್ನ್ ಹಾತ್ರಾನಾತ್ ಪಡಿಸರ್ಕೆ ಕರ್ತಾ. ಥೈ ತಿ ಅನಿ ತಿಚ್ಯಾ ವಾಂಗ್ಡಾ ವೆಭಿಚಾರ್ ಕರ್‍ತಲ್ಲ್ಯಾಕ್ನಿ ಮೊಟೊ ಸಂಕಟ್ ಹೊತ್ತಾ.ತೆಚೊ ಮನ್ ಬದ್ಲುಕ್ ನಸಲ್ಲ್ಯಾರ್ ಮಿಯಾ ಹೆ ಅತ್ತಾಚ್ ಕರ್ತಾ. ಸಮಂದ್ ಥವ್ನ್ ಘೆಟಲ್ಲೆ ತರಾಸ್ ಕರುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:22
16 ತಿಳಿವುಗಳ ಹೋಲಿಕೆ  

ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು,” ಎಂದು ಹೇಳಿದನು.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.


ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.


ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.


‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು