Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನಾ ತೆಂಕಾ ಪಸ್ವಲ್ಲ್ಯಾ ಗಿರೊ ತ್ಯಾ ಭಯಾನಕ್ ಸಾಪ್ ಅನಿ ಝುಟ್ಯಾ ಪ್ರವಾದ್ಯಾಕ್ ಅದ್ದಿಚ್ ಟಾಕಲ್ಲ್ಯಾ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ; ಅನಿ ಥೈ ತೆನಿ ಸದಾ ಸರ್ವತಾಕ್ ದಿಸ್ ಅನಿ ರಾತ್ ವಳ್ಮಳುನ್ಗೆತ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:10
12 ತಿಳಿವುಗಳ ಹೋಲಿಕೆ  

“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.


ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.


“ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.


ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು