Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:9 - ಕನ್ನಡ ಸಮಕಾಲಿಕ ಅನುವಾದ

9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ದಂಡಿಗೂ ನಮ್ಮ ಪ್ರಿಯ ಪಟ್ಟಣಕ್ಕೂ ಮುತ್ತಿಗೆಹಾಕಿದರು. ಆಗ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಸಗ್ಳ್ಯಾ ಜಗಾತ್ ಪಗಳ್ತ್ಯಾತ್, ಅನಿ ದೆವಾಚಿ ಸೈನಿಕಾ ರ್‍ಹಾತಲ್ಯಾ ಜಾಗ್ಯಾಕ್ನಿ, ಅನಿ ತ್ಯೆಚ್ಯಾ ಪ್ರೆಮಾಚ್ಯಾ ಶಾರಾಚ್ಯಾ ಭೊತ್ಯಾನಿ ಘೆರ್ ಘಾಲುನ್ ಇಬೆ ರ್‍ಹಾತ್ಯಾತ್. ಖರೆ ಸರ್‍ಗಾ ವೈನಾ ಆಗ್ ಯೆತಾ ಅನಿ ತೆಂಕಾ ನಾಸ್ ಕರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:9
33 ತಿಳಿವುಗಳ ಹೋಲಿಕೆ  

ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.


ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.


ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.


ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.


ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು.


ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.


ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.


ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ? ಇದನ್ನೆಲ್ಲಾ ನೀನು ತಿಳಿದಿದ್ದರೆ ನನಗೆ ಹೇಳು ನೋಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು