Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:12 - ಕನ್ನಡ ಸಮಕಾಲಿಕ ಅನುವಾದ

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಪ್ರಾಕಾರವಿತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು; ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತ್ಯಾ ಶಾರಾಕ್ ಎಕ್ ಉಪ್ಪರ್ಲಿ ಮೊಟಿ ಭಿತ್ತ್ ಹೊತ್ತಿ ಅನಿ ಬಾರಾ ದಾರಾ ಹೊತ್ತಿ ಅನಿ ತ್ಯಾ ಹರಿಎಕ್ ದಾರಾನಿಕ್ನಿ ಎಕೆಕ್ ದೆವಾಚ್ಯಾ ದುತಾಕ್ನಿ ನೆಮಸಲ್ಲೆ ಹೊತ್ತೆ. ಬಾರಾ ದಾರಾ ವೈನಿ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ಬಾರಾ ಘರಾನ್ಯಾಂಚಿ ನಾವಾ ಲಿವಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:12
21 ತಿಳಿವುಗಳ ಹೋಲಿಕೆ  

ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ.


ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ಮತ್ತು ನಿನ್ನ ಮೇರೆಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡುವೆನು.


ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”


ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.


ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.


ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.


ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.


ಪೂರ್ವದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.


ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು