Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:11 - ಕನ್ನಡ ಸಮಕಾಲಿಕ ಅನುವಾದ

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆ ಕೊನ್ ವಾಯ್ಟ್ ಕರುಲ್ಯಾತ್ ತೆನಿ ವಾಯ್ಟ್ ಕರುನ್ಗೆತುಚ್ ರ್‍ಹಾಂವ್ದಿತ್. ಜೊ ಕೊನ್ ಬರ್ಸೊ ಹೊಲ್ಲೊ ಹಾಯ್ ತೊ ಅನಿಉಲ್ಲೆ ಅಪ್ನಾಕುಚ್ ಬರ್ಶೆ ಕರುನ್ ಘೆಂವ್ದಿತ್; ಜೆ ಕೊನ್ ಬರಿ ಕಾಮಾ ಕರುಲ್ಯಾತ್ ತೆನಿ ಬರಿ ಕಾಮಾ ಕರುನ್ಗೆತುಚ್ ರಾಂವ್ದಿತ್, ಅನಿ ಜೆ ಕೊನ್ ಪವಿತ್ರ್ ಹಾತ್ ತೆನಿ ಪವಿತ್ರ್ ಹೊವ್ನುಚ್ ರಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:11
22 ತಿಳಿವುಗಳ ಹೋಲಿಕೆ  

ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


“ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.


ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು