Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಆಯ್ಕಾ!” ಜೆಜು ಮನ್ತಾ, “ಮಿಯಾ ಲಗ್ಗುನಾಚ್ ಯೆವ್ಲಾ! ಮಿಯಾ ಸಗ್ಳ್ಯಾಕ್ನಿ ತೆಂಚ್ಯಾ ತೆಂಚ್ಯಾ ಕಾಮಾಂಚ್ಯಾ ಪರ್ಕಾರ್ ತೆಂಕಾ ದಿತಲೆ ಭೊಮಾನ್ ಘೆವ್ನ್ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:12
19 ತಿಳಿವುಗಳ ಹೋಲಿಕೆ  

ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ”


ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಬೆಂಕಿಯಿಂದ ತಪ್ಪಿಸಿಕೊಂಡು ಉಳಿದರೆ, ಅವನಿಗೆ ಪ್ರತಿಫಲ ಸಿಕ್ಕುವುದು.


ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.


ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.


ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.


ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.


ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.


ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು