Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಶಾರಾಚ್ಯಾ ಭಾಯ್ರ್ ಲೊಕಾಕ್ನಿ ವಾಟ್ ಚುಕ್ವುತಲಿ ಕುತ್ರಿ ಸಾರ್ಕಿ ಲೊಕಾ ಹಾತ್, ತೆನಿ ನಸ್ತೆ ಕರ್‍ತ್ಯಾತ್ , ಅನಿ ಜಿವ್ ಕಾಡ್ತಾತ್, ಮುರ್ತಿಯಾಂಚಿ ಪುಜಾ ಕರ್ತಾತ್, ಅನಿ ಅಪ್ನಾಚ್ಯಾ ಕಾಮಾನಿ ಅನಿ ಬೊಲ್ನ್ಯಾನಿ ಅನಿ ಕರ್ನ್ಯಾನಿ ಝುಟೆ ಕರುನ್ ದಾಕ್ವುತಲ್ಯಾಚೊ ಪ್ರೆಮ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:15
29 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಇವುಗಳ ನಿಮಿತ್ತ ದೇವರ ಕೋಪವು ಉಂಟಾಗುತ್ತಲಿದೆ.


ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಸೀಮೋನನು ತನ್ನ ಮಂತ್ರಶಕ್ತಿಯಿಂದ ಅವರನ್ನು ಆಶ್ಚರ್ಯಗೊಳಿಸಿದ್ದರಿಂದ ಅವರು ಅವನನ್ನು ಹಿಂಬಾಲಿಸುತ್ತಿದ್ದರು.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.


ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.


ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ.


ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು