Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:18 - ಕನ್ನಡ ಸಮಕಾಲಿಕ ಅನುವಾದ

18 ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೂ ನಾನು ಕೊಡುವ ಎಚ್ಚರಿಕೆ ಇದು: “ಯಾವನಾದರೂ ಇವುಗಳಿಗೆ ಏನನ್ನಾದರೂ ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ವಿಪತ್ತುಗಳು ಬಂದೆರಗುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಜುವಾಂವ್ ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಲ್ಯಾಕ್ನಿ ಉಶಾರ್ಕಿ ದಿವ್ನ್ ಸಾಂಗ್ತಾ. ಹ್ಯಾ ಗೊಸ್ಟಿಯಾತ್ನಿ ಅನಿ ಜಾಸ್ತಿಚೆ ಕೊನ್‍ಬಿ ಮಿಳ್ವುಲ್ಯಾರ್, ದೆವ್ ತ್ಯೆಚ್ಯಾ ಶಿಕ್ಷೆತ್ ಹ್ಯಾ ಪುಸ್ತಕಾತ್ ಸಾಂಗಲ್ಲಿ ಸಗ್ಳಿ ತರಾಸಾ ಮಿಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:18
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.


ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.


ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.


“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.


ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು