5 ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.
ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’
ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!
ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”
“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.
ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.
ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.
ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.
ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.
ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.
ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.