Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:12 - ಕನ್ನಡ ಸಮಕಾಲಿಕ ಅನುವಾದ

12 ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:12
26 ತಿಳಿವುಗಳ ಹೋಲಿಕೆ  

ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ಆ ಸ್ತಂಭಗಳನ್ನು ಮಂದಿರದ ಮಂಟಪದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು.


ದ್ವಾರಮಂಟಪದ ಅಗಲವು ಸುಮಾರು ಹನ್ನೊಂದು ಮೀಟರ್ ಮತ್ತು ಮುಂಭಾಗದಿಂದ ಹಿಂಭಾಗಕ್ಕೆ ಸುಮಾರು ಆರು ಮೀಟರ್. ಅದನ್ನು ಹತ್ತಲು ಮೆಟ್ಟಿಲುಗಳಿದ್ದವು ಮತ್ತು ಎರಡೂ ಬದಿಗಳಲ್ಲಿ ಬಾಗಿಲಿನ ಚೌಕಟ್ಟುಗಳ ಬದಿಗಳಲ್ಲಿ ಕಂಬಗಳು ಇದ್ದವು.


ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು