Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:19 - ಕನ್ನಡ ಸಮಕಾಲಿಕ ಅನುವಾದ

19 ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಪ್ರೆಮ್ ಕರ್ತಲ್ಯಾಕ್ನಿ ಮಿಯಾ ಜೊರ್ ಕರ್ತಾ ಅನಿ ಶಿಕ್ಷಾ ದಿತಾ. ತಿಯಾ ಉಮ್ಮೆದಿಚೊ ಹೊವ್ಚೊ, ಅನಿ ತುಜೆ ಪಾಪಾಚೆ ಜಿವನ್ ಸೊಡುನ್ ಬರೊ ಹೊವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:19
31 ತಿಳಿವುಗಳ ಹೋಲಿಕೆ  

ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.


ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.


ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?


ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.


ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.


ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.


ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.


ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.


ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


“ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು