Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:2 - ಕನ್ನಡ ಸಮಕಾಲಿಕ ಅನುವಾದ

2 ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳು ನನಗೆ ಪರಿಪೂರ್ಣವಾಗಿ ಕಂಡುಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಚ್ಚೆತ್ತು ನಿನ್ನಲ್ಲಿ ಉಳಿದಿರುವುಗಳನ್ನು ಉತ್ತೇಜನಗೊಳಿಸು; ಅವು ಸಾವಿನ ದವಡೆಯಲ್ಲಿವೆ. ನನ್ನ ದೇವರ ದೃಷ್ಟಿಯಲ್ಲಿ ನಿನ್ನ ಕೃತ್ಯಗಳು ಯಾವುವೂ ಸಮಗ್ರವಾಗಿರುವುದು ನನಗೆ ಕಂಡುಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಚ್ಚರವಾಗಿರು; ಸಾಯುವ ಹಾಗಿದ್ದ ಉಳಿದವುಗಳನ್ನು ದೃಢಪಡಿಸು. ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಸಂಪೂರ್ಣವಾದದ್ದೆಂದು ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಸೆಮನುನ್ ಉಟ್ ಅನಿ ಜೆ ಕವ್ಡೆ ತುಜೆಕ್ಡೆ ಝಿತ್ತೆ ಹುರಲ್ಲೆ ಹಾಯ್ ತೆಬಿ ಮರುನ್ ಜಾವ್ಚ್ಯಾ ಅದ್ದಿ ಘಟ್ ಕರುನ್ ಘೆ. ತಿಯಾ ಜೆ ಕಾಯ್-ಕಾಯ್ ಕರ್‍ಲೆ ತೆ ಮಾಜ್ಯಾ ದೆವಾಚ್ಯಾ ನದ್ರೆತ್ ಸಮಾ ದಿಸಿನಸಲ್ಲೆ ಕರ್‍ಲೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:2
31 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ. ನಡುಗುವ ಮೊಣಕಾಲುಗಳನ್ನು ದೃಢಪಡಿಸಿರಿ.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.


ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.


ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


“ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ.


“ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.


ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.


ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.


ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು; ನನ್ನ ಆದರಣೆಯ ಮಾತುಗಳು ನಿಮಗೆ ಉಪಶಮನ ಮಾಡುವುದು.


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


“ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು