Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:5 - ಕನ್ನಡ ಸಮಕಾಲಿಕ ಅನುವಾದ

5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜಾನ್ತ್ಯಾನಿತ್ಲ್ಯಾ ಎಕ್ಲ್ಯಾನ್ ಮಾಕಾ, “ರಡುನಕೊ, ಬಗ್! ಜುದಾಸಾಚ್ಯಾ ಕುಳಿತ್ಲೊ ಸಿವ್, ದಾವಿದಾಚ್ಯಾ ಘರಾನ್ಯಾತ್ಲೊ ಮೊಟೊ ಮಾನುಸ್, ತೊ ಜಿಕುನ್ ಜಯ್ ಹೊಲ್ಲೊ ಹಾಯ್, ಅನಿ ತೊ ತೆ ಸಾತ್ ಛಪ್ಪೆ ಫೊಡುನ್ ತಿ ಸುಳ್ಳಿ ಉಗಡ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:5
25 ತಿಳಿವುಗಳ ಹೋಲಿಕೆ  

ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.


ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”


ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.


ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.


ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.


ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು.


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು.


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ.


ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.


ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಆಗ ಸುರುಳಿಯನ್ನು ಬಿಚ್ಚುವುದಕ್ಕಾಗಲಿ, ಅದರಲ್ಲಿ ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.


ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.


ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.


ಗುರಾಣಿಗಳ ಸಾಲುಗಳು ಅದರ ಬೆನ್ನಿಗೆ ಹೆಮ್ಮೆಯಾಗಿವೆ; ಅವು ಒಟ್ಟಿಗೆ ಬಿಗಿಯಾಗಿ ಮುದ್ರಿಸಲಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು