Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:13 - ಕನ್ನಡ ಸಮಕಾಲಿಕ ಅನುವಾದ

13 ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಿರುಗಾಳಿಯಿಂದ ಅಂಜೂರ ಮರದ ಕಾಯಿಗಳು ಉದುರಿಬೀಳುವಂತೆ ನಕ್ಷತ್ರಗಳು ಆಕಾಶದಿಂದ ಭೂಮಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪೂರ್ಣಚಂದ್ರನು ರಕ್ತದಂತಾದನು; ಅತ್ತೀಮರವು ಬಿರುಗಾಳಿಯಿಂದ ಅಲ್ಲಾಡಿಸಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂವಿುಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಕಾಶದಲ್ಲಿದ್ದ ನಕ್ಷತ್ರಗಳು, ಬಿರುಗಾಳಿ ಬೀಸಿದಾಗ ಅಂಜೂರದ ಹಣ್ಣುಗಳು ಮರದಿಂದ ಭೂಮಿಯ ಮೇಲೆ ಉದುರುವಂತೆ ಉದುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮೊಟೊ ವಾರೊ ಮಾರಲ್ಲ್ಯಾ ತನ್ನಾ ಹುಂಬ್ರಿಚ್ಯಾ ಝಾಡಾಚಿ ಹನ್ನಾ ಪಡ್ಲ್ಯಾ ಸರ್ಕೆ ಮಳ್ಬಾ ವೈಲ್ಯಾ ಚಿಕ್ಕಿಯಾ ಖಾಲ್ತಿ ಜಿಮ್ನಿ ವರ್ತಿ ಪಡ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:13
15 ತಿಳಿವುಗಳ ಹೋಲಿಕೆ  

ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.


ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು.


ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು.


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳ ಅಂಜೂರದ ಗಿಡಗಳ ಹಾಗಿರುವುವು. ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.


ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.


ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’


ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು; ದುಷ್ಟನು ಹೂವುಗಳನ್ನು ಉದುರಿಸುವ ಓಲಿವ್ ಎಣ್ಣೆಯ ಮರದ ಹಾಗೆ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು