Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:15 - ಕನ್ನಡ ಸಮಕಾಲಿಕ ಅನುವಾದ

15 ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಭೂರಾಜರೂ ಪ್ರಭುಗಳೂ ಸಹಸ್ರಾಧಿಪತಿಗಳೂ ಐಶ್ವರ್ಯವಂತರೂ ಪರಾಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಹ್ಯಾ ಜಿಮ್ನಿ ವೈಲೆ ರಾಜಾ, ಅದಿಕಾರಿ ಅನಿ ಸೈನಿಕಾಂಚೆ ಮೊಟೆ-ಮೊಟೆ ಅದಿಕಾರಿ, ಸಾವ್ಕಾರಾ ಅನಿ ತಾಕತ್ವರ್ ಲೊಕಾ, ಅನಿ ಹುರಲ್ಲಿ ಸಗ್ಳಿ ಲೊಕಾ, ಗುಲಾಮಾ ಅನಿ ಸ್ವತಂತ್ರ್ ಅಸಲ್ಲಿ ಸಗ್ಳಿ ಲೊಕಾ, ಢುರ್‍ಯಾತ್ನಿ ಅನಿ ಮಡ್ಡಿಯಾಂಚ್ಯಾ ಮೊಟ್ಯಾ-ಮೊಟ್ಯಾ ಗುಂಡ್ಯಾಂಚ್ಯಾ ಮುಳಾತ್ನಿ ಜಾವ್ನ್ ನಿಪ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:15
19 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.


ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ. ಧೂಳಿನಲ್ಲಿ ನೀನು ಅಡಗಿಕೋ.


ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.


ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.


ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ.


ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.


ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.


ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು