Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:14 - ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಮಿಯಾ,“ಸಾಯ್ಬಾ ಮಾಕಾ ಗೊತ್ತ್ ನಾ, ತುಕಾಚ್ ತೆ ಗೊತ್ತ್ ಹಾಯ್.” ಮನುನ್ ಜಬಾಬ್ ದಿಲೊ. ತೆನಿ ಮಾಕಾ,“ಮೊಟ್ಯಾ ತರಾಸಾತ್ನಾ ಸುರಕ್ಷಿತ್ ಪಾರ್ ಹೊವ್ನ್ ಯೆಲ್ಲಿ ಲೊಕಾ ಹಿ. ತೆನಿ ಅಪ್ನಾಚೆ ಝಗೆ ಬೊಕ್ಡಾಚ್ಯಾ ರಗ್ತಾನ್ ಧುವ್ನ್ ಫಾಂಡ್ರೆ ಕರುನ್ ಘೆಟ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:14
30 ತಿಳಿವುಗಳ ಹೋಲಿಕೆ  

ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ಅದರ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇರಿಸಿದನು.


ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.


ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು