Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಅನಿಎಕ್ ದೆವಾಚ್ಯಾ ದುತಾನ್ ಝಿತ್ತ್ಯಾ ದೆವಾಚೊ ಛಪ್ಪೊ ಘೆವ್ನ್ ಯೆತಲೆ ಮಿಯಾ ಬಗಟ್ಲೊ. ತೆನಿ ಮೊಟ್ಯಾನ್, ತ್ಯಾ ದೆವಾನ್ ಜಿಮಿನ್ ಅನಿ ಸಮುಂದರಾಕ್ ವಾಯ್ಟ್ ಕರ್ತಲೊ ಅದಿಕಾರ್ ದಿಲ್ಲ್ಯಾ ಚಾರ್ ದೆವ್‍ದುತಾಕ್ನಿ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:2
29 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.


ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.


ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, “ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.


ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.


ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.


ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.


ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು