Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:10 - ಕನ್ನಡ ಸಮಕಾಲಿಕ ಅನುವಾದ

10 ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೀಪದಂತೆ ಉರಿಯುವ ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೂರನೆಯ ದೇವದೂತನು ತುತೂರಿಯನ್ನೂದಿದಾಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಕೆಳಗೆ ಬಿತ್ತು. ಆ ನಕ್ಷತ್ರವು ನದಿಗಳಲ್ಲಿ ಮತ್ತು ನೀರಿನ ಬುಗ್ಗೆಗಳಲ್ಲಿ ಮೂರನೆಯ ಒಂದು ಭಾಗದ ಮೇಲೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನಾ ತಿನ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ಎಕ್ ಝಳ್ತಲಿ ಮೊಟಿ ಚಿಕ್ಕಿ ಮಳ್ಬಾ ವೈನಾ ನ್ಹ‍ಯಾಂಚ್ಯಾ ಅನಿ ಪಾನಿಯಾಂಚ್ಯಾ ಝರ್ಯಾಂಚ್ಯಾ ತಿನಾತ್ಲ್ಯಾ ಎಕ್ ಭಾಗಾ ವರ್ತಿ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:10
21 ತಿಳಿವುಗಳ ಹೋಲಿಕೆ  

ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.


ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.


ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?


ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು.


ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.


ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.


ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು