Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:8 - ಕನ್ನಡ ಸಮಕಾಲಿಕ ಅನುವಾದ

8 ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎರಡನೆಯ ದೇವದೂತನು ತುತೂರಿಯನ್ನೂದಿದಾಗ ಬೆಂಕಿಹತ್ತಿ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿರುವ ಒಂದು ವಸ್ತು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿದ್ದ ದೊಡ್ಡ ಬೆಟ್ಟವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರದೊಳಕ್ಕೆ ಎಸೆಯಲಾಯಿತು. ಆಗ ಸಮುದ್ರದ ಮೂರನೆಯ ಒಂದು ಭಾಗ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ದೊನ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ಆಗಿಚ್ಯಾ ಮೊಟ್ಯಾ ಮಡ್ಡಿ ಸರ್ಕೆ ಕಾಯ್ಕಿ ಸಮುಂದರಾತ್ ಟಾಕುನ್ ಹೊಲೆ. ಸಮುಂದರಾಚೊ ತಿನಾತ್ಲೊ ಎಕ್ ಭಾಗ್ ರಗಾತ್ ಹೊವ್ನ್ ಬದಲ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:8
13 ತಿಳಿವುಗಳ ಹೋಲಿಕೆ  

“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.


ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.


“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.


ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು