Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:1 - ಕನ್ನಡ ಸಮಕಾಲಿಕ ಅನುವಾದ

1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐದನೆಯ ದೇವದೂತನು ತುತೂರಿಯನ್ನೂದಿದಾಗ ಆಕಾಶದಿಂದ ಭೂವಿುಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದಕೈ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ ಹೋಗುವ ಬೀಗದ ಕೈ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಪಾಚ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್. ತನ್ನಾ ಎಕ್ ಚಿಕ್ಕಿ ಮಳ್ಬಾ ವೈನಾ ಜಿಮ್ನಿ ವರ್ತಿ ಪಡ್ತಲೆ ಮಿಯಾ ಬಗಟ್ಲೊ, ತೆಚೆಕ್ಡೆ ಪಾತಾಳಾಚಿ ಚಾವಿ ದಿಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:1
20 ತಿಳಿವುಗಳ ಹೋಲಿಕೆ  

ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೀಪದಂತೆ ಉರಿಯುವ ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.


ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.


ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.”


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.


ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?


ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು