Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:15 - ಕನ್ನಡ ಸಮಕಾಲಿಕ ಅನುವಾದ

15 ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವದಕ್ಕಾಗಿ ಅದೇ ವರುಷ ಅದೇ ತಿಂಗಳು ದಿನ ತಾಸಿಗೆ ಸಿದ್ಧವಾಗಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾ ಚಾರ್ ದೆವಾಚ್ಯಾ ದುತಾಕ್ನಿ ಸೊಡುನ್ ಹೊಲೆ; ಅಸೆ ತ್ಯಾ ದೆವಾಚ್ಯಾ ದುತಾಕ್ನಿ ಹ್ಯಾಚ್ ಎಳಾರ್ ಹೊಂವ್ದಿ, ಆಜುಚ್ ಹೊಂವ್ದಿ, ಹ್ಯಾಚ್ ಮ್ಹಯಿನ್ಯಾತ್ ಹೊಂವ್ದಿ, ಹ್ಯಾಚ್ ವರ್ಸಾತ್ ಹೊಂವ್ದಿ ಮಾನ್ಸಾನಿತ್ಲೊ ತಿನಾತ್ಲೊ ಎಕ್ ಭಾಗ್ ಜಿವಾನಿ ಮಾರುಕ್ ಮನುನ್ ತಯಾರ್ ಕರುನ್ ಥವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:15
9 ತಿಳಿವುಗಳ ಹೋಲಿಕೆ  

ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗ ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗ ನಾಶವಾದವು.


ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು.


ಅವುಗಳು ಅವರನ್ನು ಕೊಲ್ಲದೆ, ಐದು ತಿಂಗಳುಗಳವರೆಗೆ ಯಾತನೆಪಡಿಸುವುದಕ್ಕೆ ಅಧಿಕಾರ ಕೊಡಲಾಯಿತು. ಅವರ ಯಾತನೆಯು, ಚೇಳು ತನ್ನ ಕೊಂಡಿಯಿಂದ ಮನುಷ್ಯರನ್ನು ಕುಟುಕಿಹಾಕಿದಾಗ ಆಗುವ ನೋವಿನಂತಿತ್ತು.


ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು.


ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೀಪದಂತೆ ಉರಿಯುವ ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.


ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು