Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:17 - ಕನ್ನಡ ಸಮಕಾಲಿಕ ಅನುವಾದ

17 ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಂದರೆ - ಸವಾರರ ಕವಚಗಳ ಬಣ್ಣವು ಬೆಂಕಿ ಹೊಗೆ ಗಂಧಕ ಇವುಗಳ ಬಣ್ಣದ ಹಾಗಿತ್ತು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಮಿಯಾ ಮಾಜ್ಯಾ ದರ್ಶನಾತ್ ಘೊಡ್ಕಿ ಅನಿ ತೆಂಚ್ಯಾ ವೈನಿ ಸವಾರಿ ಕರ್ತಲ್ಯಾಕ್ನಿ ಬಗಟ್ಲೊ: ತೆಂಚ್ಯಾ ಹಿರ್‍ದ್ಯಾಂಚಿ ಕವಚಾ ಆಗಿ ಸರ್ಕಿ ತಾಂಬ್ಡಿ, ಅನಿ ಎಕ್ ನಮುನಿ ನಿಳ್ಯಾ ಸರ್ಕ್ಯಾ ರಂಗಾಚಿ, ಅನಿ ಎಕ್ ನಮನಿಚ್ಯಾ ನಿಳ್ಯಾ ಬನ್ನಾಚೊ ಪೊಡೊ ಸರ್ಕಿ ಹಳ್ದುಳಿ ಹೊತ್ತಿ. ಘೊಡ್ಕ್ಯಾಂಚಿ ತೊಂಡಾ ಸಿವಾಂಚ್ಯಾ ತೊಂಡಾಂಚ್ಯಾ ಸರ್ಕಿ ಹೊತ್ತಿ, ಅನಿ ತೆಂಚ್ಯಾ ತೊಂಡಾನಿತ್ನಾ ಆಗ್, ಡುಕೊಟ್, ಅನಿ ಗಂಧಕ್ ಭಾಯ್ರ್ ಯೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:17
16 ತಿಳಿವುಗಳ ಹೋಲಿಕೆ  

ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಇದಲ್ಲದೆ ಮರುಭೂಮಿಯಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ, ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು. ಅವರ ಮುಖಗಳು ಸಿಂಹಗಳಂತೆ ಭೀಕರವಾಗಿದ್ದವು. ಪರ್ವತಗಳ ಮೇಲೆ ಇವರು ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.


ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು.


ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ.


ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ.


ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು