Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ತಾವು ನಡಿಸುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳೊಳಗೆ ಒಂದನ್ನೂ ಬಿಟ್ಟು ಮಾನಸಾಂತರ ಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಲೊಕಾಕ್ನಿ ಜಿವಾನಿ ಮಾರ್‍ತಲ್ಯಾತ್ನಾ ಹೊಂವ್ದಿ, ಜಾದು ಕರ್‍ತಲ್ಯಾತ್ನಾ ಹೊಂವ್ದಿತ್, ತೆಂಚ್ಯಾ ಬುರ್ಶ್ಯಾ ಆಂಗಾಚ್ಯಾ ಸಮಂದಾತ್ನಾ ಹೊಂವ್ದಿ, ನಾಹೊಲ್ಯಾರ್ ಚೊರ್ತಲ್ಯಾತ್ನಾ ಮನ್ ಬದ್ಲುಕ್ ನತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:21
24 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು,” ಎಂದು ಹೇಳಿದನು.


ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.


ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.


ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು