Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:11 - ಕನ್ನಡ ಸಮಕಾಲಿಕ ಅನುವಾದ

11 ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಫಳಾದೆನಲ್ಲಾ [ಎಂದು ಪ್ರಲಾಪಿಸುತ್ತಾಳೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:11
20 ತಿಳಿವುಗಳ ಹೋಲಿಕೆ  

ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.


“ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.


ಅವರು ನಗರದ ಬೀದಿಗಳಲ್ಲಿ ಗಾಯಪಟ್ಟವರ ಹಾಗೆ ಮೂರ್ಛೆ ಹೋದಾಗ, ತಮ್ಮ ತಾಯಂದಿರ ಎದೆಯಲ್ಲಿ ಪ್ರಾಣ ಸುರಿದಾಗ, “ತಿನ್ನಲಿಕ್ಕೆ ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ?” ಎಂದು ತಮ್ಮ ತಾಯಂದಿರಿಗೆ ಕೇಳುತ್ತಾರೆ.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.


ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು