Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:12 - ಕನ್ನಡ ಸಮಕಾಲಿಕ ಅನುವಾದ

12 ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:12
18 ತಿಳಿವುಗಳ ಹೋಲಿಕೆ  

ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.


ನನ್ನ ಮೇಲೆ ನಿಮ್ಮ ಬೇಸರವು ಆವರಿಸಿದೆ. ನಿಮ್ಮ ದಂಡನೆಗಳು ನನ್ನನ್ನು ಬಾಧಿಸಿರುತ್ತವೆ.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’


ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು.


ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.


ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು