Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:22 - ಕನ್ನಡ ಸಮಕಾಲಿಕ ಅನುವಾದ

22 ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನನ್ನ ಶತ್ರುಗಳು ಎಷ್ಟು ದುಷ್ಟರಾಗಿದ್ದಾರೆ ನೋಡು. ನನ್ನ ಎಲ್ಲ ಪಾಪಗಳ ನಿಮಿತ್ತ ನೀನು ನನಗೆ ಮಾಡಿದಂತೆ ಅವರಿಗೂ ಮಾಡಲು ನಿನಗೆ ಸಾಧ್ಯವಾಗುವುದು. ನಾನು ಪದೇಪದೇ ನರಳಾಡುತ್ತಿರುವುದರಿಂದ ನೀನು ಇದನ್ನು ಮಾಡಬೇಕು. ನನ್ನ ಹೃದಯವು ಅಸ್ವಸ್ಥಗೊಂಡಿರುವುದರಿಂದ ನೀನು ಇದನ್ನು ಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:22
16 ತಿಳಿವುಗಳ ಹೋಲಿಕೆ  

ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು.


ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.


ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.


ನಮಗೂ, ನಮ್ಮ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬಿಲೋನಿನ ಮೇಲೆ ಇರಲಿ,” ಎಂದು ಚೀಯೋನ್ ನಿವಾಸಿಗಳು ಹೇಳುತ್ತಾರೆ; “ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ,” ಎಂದು ಯೆರೂಸಲೇಮು ಹೇಳುವುದು.


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು.


ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.


ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.


“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು