Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:3
22 ತಿಳಿವುಗಳ ಹೋಲಿಕೆ  

ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವರಾದ ಕೆಲವರನ್ನೂ, ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.


ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.


ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.


ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.


ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.


ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು