Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:21 - ಕನ್ನಡ ಸಮಕಾಲಿಕ ಅನುವಾದ

21 ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:21
33 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”


ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ. ಕನಿಕರಿಸದೆ ಕೊಂದು ಹಾಕಿರುವಿರಿ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.


ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


ನಿನ್ನಿಂದ ಗಂಡಸರನ್ನೂ, ಹೆಂಗಸರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಹಿರಿಯರನ್ನೂ, ಕಿರಿಯರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಯುವಕನನ್ನೂ ಯುವತಿಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.


ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ.


ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.


ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.


“ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.


ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು