Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:9 - ಕನ್ನಡ ಸಮಕಾಲಿಕ ಅನುವಾದ

9 ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:9
27 ತಿಳಿವುಗಳ ಹೋಲಿಕೆ  

ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.


ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.


ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.


ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.


ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.


ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.


ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು