Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:31 - ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಕರ್ತದೇವರು ಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನರಮಾನವನನ್ನು ಸ್ವಾಮಿ ಸದಾಕಾಲಕ್ಕೂ ತೊರೆದುಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಕರ್ತನು ಸದಾಕಾಲಕ್ಕೂ ಬಿಟ್ಟುಬಿಡುವವನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:31
15 ತಿಳಿವುಗಳ ಹೋಲಿಕೆ  

ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


“ನಿರಂತರವಾಗಿ ಯೆಹೋವ ದೇವರು ತಳ್ಳಿಬಿಡುವರೋ? ಇನ್ನೆಂದಿಗೂ ದಯೆತೋರದೆ ಇರುವರೋ?


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.


ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.


ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು