Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:57 - ಕನ್ನಡ ಸಮಕಾಲಿಕ ಅನುವಾದ

57 ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು ಭಯಪಡಬೇಡ ಎಂದು ಹೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:57
16 ತಿಳಿವುಗಳ ಹೋಲಿಕೆ  

ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ. ನನ್ನ ಶತ್ರುಗಳ ನಿಮಿತ್ತ ನನ್ನನ್ನು ಬಿಡಿಸಿರಿ.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.


ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು