Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:7 - ಕನ್ನಡ ಸಮಕಾಲಿಕ ಅನುವಾದ

7 ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:7
11 ತಿಳಿವುಗಳ ಹೋಲಿಕೆ  

ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ; ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾರೆ.


ದೇವರು ಸುತ್ತಲೂ ಬೇಲಿಹಾಕಿ, ದಾರಿ ಮುಚ್ಚಿದ ಮೇಲೆ ಅವರಿಗೆ ಬೆಳಕು ಏಕೆ?


ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.


ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.


ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.


ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ, ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.


ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು