Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:21 - ಕನ್ನಡ ಸಮಕಾಲಿಕ ಅನುವಾದ

21 ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:21
24 ತಿಳಿವುಗಳ ಹೋಲಿಕೆ  

“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.


ಶಾಫೀರಿನ ನಿವಾಸಿಯೇ, ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, ಚಾನಾನಿನಲ್ಲಿ ವಾಸಿಸುವವರು ಹೊರಗೆ ಬರುವುದಿಲ್ಲ, ಬೇತ್ ಎಚೆಲು ನರಳುತ್ತಿದೆ. ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ.


ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.


ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.


ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು