Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:7 - ಕನ್ನಡ ಸಮಕಾಲಿಕ ಅನುವಾದ

7 ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:7
15 ತಿಳಿವುಗಳ ಹೋಲಿಕೆ  

ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.


ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.


ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು.


ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು.


ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು.


ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.”


ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವೆ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರಬಾರದು. ಏಕೆಂದರೆ ಗರ್ಭದಿಂದಲೇ ಆ ಹುಡುಗನು ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿರುವನು. ಅವನು ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ, ರಕ್ಷಿಸಲು ಪ್ರಾರಂಭಿಸುವನು,” ಎಂದನು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.


ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.


ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!


ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು