Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:17 - ಕನ್ನಡ ಸಮಕಾಲಿಕ ಅನುವಾದ

17 ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೀಯೋನ್ ಪರ್ವತವು ಹಾಳಾಯಿತಲ್ಲಾ! ನರಿಗಳು ಅಲ್ಲಿ ಸಂಚರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:17
17 ತಿಳಿವುಗಳ ಹೋಲಿಕೆ  

ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ.


ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”


ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.


ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.


‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ.


ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.


ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.


ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು