Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರೇ, ನೀವು ಎಂದೆಂದಿಗೂ ಇರುತ್ತೀರಿ. ನಿಮ್ಮ ಸಿಂಹಾಸನವು ತಲತಲಾಂತರಗಳವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:19
23 ತಿಳಿವುಗಳ ಹೋಲಿಕೆ  

ಆದರೆ ನೀವು ಯೆಹೋವ ದೇವರೇ, ಎಂದೆಂದಿಗೂ ಇರುತ್ತೀರಿ; ನಿಮ್ಮ ಪ್ರಸಿದ್ಧ ಕಾರ್ಯಗಳು ತಲತಲಾಂತರಕ್ಕೂ ಇರುತ್ತವೆ.


ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.


ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.


ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.


ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ, ಸರ್ವ ಸಂತತಿಗಳವರೆಗೂ ಆಳಿಕೆ ಮಾಡುತ್ತಾರೆ. ಯೆಹೋವ ದೇವರಿಗೆ ಸ್ತೋತ್ರ.


ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.


ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.


ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು