Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:21 - ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿಯೋ, ಏನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:21
19 ತಿಳಿವುಗಳ ಹೋಲಿಕೆ  

ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ನಮ್ಮ ರಕ್ಷಕ ಆಗಿರುವ ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ, ನಮ್ಮ ಮೇಲಿರುವ ನಿಮ್ಮ ಅಸಂತೋಷವನ್ನು ತೊಲಗಿಸಿರಿ.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.


ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.


“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.


ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.


ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.


ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು