Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:22
13 ತಿಳಿವುಗಳ ಹೋಲಿಕೆ  

ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’


ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ. ಎಂದೆಂದಿಗೂ ಪಾಪವನ್ನು ಜ್ಞಾಪಕ ಮಾಡಬೇಡ. ನೋಡಿರಿ, ನಾವು ಬೇಡುತ್ತೇವೆ, ದೃಷ್ಟಿ ಇಡಿರಿ. ನಾವೆಲ್ಲರೂ ನಿನ್ನ ಜನರೇ.


ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ.


ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.


ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ?


ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?


ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವುದು; ಏಕೆಂದರೆ, ಯೆಹೋವ ದೇವರು ಅವರನ್ನು ತಳ್ಳಿದ್ದಾರೆ.”


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು