Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:7 - ಕನ್ನಡ ಸಮಕಾಲಿಕ ಅನುವಾದ

7 ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಪಿತೃಗಳು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:7
15 ತಿಳಿವುಗಳ ಹೋಲಿಕೆ  

“ಆ ದಿನಗಳಲ್ಲಿ, “ ‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’


ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.


“ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’


ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.


ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.


ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?


‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.


ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು