Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:8 - ಕನ್ನಡ ಸಮಕಾಲಿಕ ಅನುವಾದ

8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:8
16 ತಿಳಿವುಗಳ ಹೋಲಿಕೆ  

ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ.


ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ. ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು.


ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ, ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ.


ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು