Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:10 - ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:10
14 ತಿಳಿವುಗಳ ಹೋಲಿಕೆ  

ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.


ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.


“ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು.


ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ.


ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.


ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.


ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು